ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು . ಪ್ರಾಣಿಯನ್ನು ಮಕ್ಕಳು ಏನು ಮಾಡಿದರು ? ಬನ್ನಿ , ಈ ಕತೆಯಲ್ಲಿ ತಿಳಿಯೋಣ .
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ? ಹೌದು .. ರಾಮಾಯಣದ ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .
ಕಾಡಿನಲ್ಲಿ ವಾಸ ಆಗಿದ್ದ ಕಾಗೆ ಮರಿಗೆ ನೀರಿನಲ್ಲಿ ಈಜುತ್ತಿದ್ದ ಬೆಳ್ಳಗೆ ಸುಂದರವಾಗಿದ್ದ ಹಂಸವನ್ನ ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು . ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ? ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ ಈ ಪುಟ್ಟ ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು .
ಕಾಡಿನಲ್ಲಿ ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ ಬಣ್ಣ ಇತ್ತು !. ಆ ಬಣ್ಣದ ಜತೆ ಕಾಡಿನಲ್ಲಿ ಬೇರೆ ಮರಿಗಳ ಜತೆ ಬೇರೆಯೋಕೆ ಈ ಆನೆ ಮರಿಗೆ ಸಾಧ್ಯ ಆಯಿತೇ ?
ರಕ್ಷಿತ್ ಗೆ ಕಾರುಗಳು ಅಂದರೆ ತುಂಬಾ ಇಷ್ಟ. ಒಂದು ದಿವಸ ಅವನ ಅಮ್ಮ ಅವನಿಷ್ಟದ ಕೆಂಪು ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ ದಾನ ಮಾಡಿದಾಗ ರಕ್ಷಿತ್ ಗೆ ಆದ ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು ಮಾಡಿದ ? ಬನ್ನಿ ಈ ಕತೆ ಕೇಳಿ ತಿಳಿದುಕೊಳ್ಳೋಣ
” ಕೇಳಿರೊಂದು ಕಥೆಯ ” ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು ಮಾಡಿದ್ದೆವು . ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ ಈ ವಾರದ ಕತೆ “ರೋಹಿತನ ಸಾಹಸ ” . ಹೊರಗೆ ಜೋರಾಗಿ ಬೀಳುತ್ತಿದ್ದ ಮಳೆಯಲ್ಲಿ ಯಾವುದೋ ಪ್ರಾಣಿ ಕೂಗುವ ಸದ್ದು ಕೇಳಿಸ್ತು . ಮನೆಯಲ್ಲಿ ಬೇಜಾರು ಮಾಡಿಕೊಂಡು ಕುಳಿತಿದ್ದ ರೋಹಿತ್ ಆಗ ಏನು ಮಾಡಿದ ? ಕೇಳಿ ಈ ರೋಚಕ ಕಥೆ
" ಕೇಳಿರೊಂದು ಕಥೆಯ " ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು ಮಾಡಿದ್ದೆವು . ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ ಈ ವಾರದ ಕತೆ "ಹೂದಾನಿ " . ತೇಜಸ್ , ಅಂಕಿತ್ ಹಾಗೂ ದಿವ್ಯ ಮನೆಯಲ್ಲಿ ಆಟ ಆಡ್ತಿದ್ದಾಗ ಮನೆಯಲ್ಲಿದ್ದ ಹೂದಾನಿ ( Flower Vase ) ಬಿದ್ಧು ಹೋಗತ್ತೆ . ಆಗ , ಆ ಮಕ್ಕಳೇನು ಮಾಡಿದರು . ಕೇಳಿ ಈ ಕುತೂಹಲಕಾರಿ ಕಥೆ .
ಮರಳುಗಾಡಿನಲ್ಲಿ ವಾಸ ಮಾಡೋ ಒಂಟೆ ಅಸಾಮಾನ್ಯ ಪ್ರಾಣಿ . ದಿನಗಟ್ಟಲೆ ನೀರಿಲ್ಲದೆ ಬಿಸಿಲಿನಲ್ಲಿ ಇರುವ ಶಕ್ತಿ ಇರುವ ಈ ಪ್ರಾಣಿಯ ಬಗ್ಗೆ ನಮ್ಮ ಪುಟಾಣಿ ಕೇಳಿಗಾರ್ತಿ ಪ್ರಖ್ಯಾ ಇನ್ನಷ್ಟು ವಿಷಯಗಳನ್ನು ಕಥೆಯ ರೂಪದಲ್ಲಿ ನಿರೂಪಿಸಿದ್ದಾಳೆ .
ಈದ್ ಹಬ್ಬ ಮುಸಲ್ಮಾನರು ಆಚರಣೆ ಮಾಡುವ ಮಹತ್ವದ ಹಬ್ಬಗಳಲ್ಲೊಂದು . ರಂಜಾನ್ ತಿಂಗಳಲ್ಲಿ ಬರುವ ಈ ಹಬ್ಬದ ಬಗ್ಗೆ ಇನ್ನಷ್ಟು ತಿಳಿಯೋಣ ಬನ್ನಿ !
4 ವರ್ಷದ ಪುಟ್ಟ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸುವ " ಪಾರಿವಾಳ ಮತ್ತು ಇರುವೆಯ " ಕತೆ . ಇದರ ಮೂಲ ಕತೆ ಇಲ್ಲಿ ಕೇಳಬಹುದು - https://kelirondukatheya.org/ep95/
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸಿರುವ "ಮಿಸಾಕೊ ಮತ್ತು ಓನಿ " " ಕತೆ . ಇದರ ಮೂಲ ಕಥೆ ಇಲ್ಲಿ ಕೇಳಬಹುದು - https://kelirondukatheya.org/misako-and-oni/
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ "ಸಿಂಹದ ಮೀಸೆ " ಕಥೆಯನ್ನು ನಿರೂಪಿಸಿ ಕಳಿಸಿದ್ದಾನೆ .
Narration of popular story - The woodcutter and the ax by our listener Shravan Jois. The original story is available at https://kelirondukatheya.org/ep93/
A young listener sharing a self narrated cute story called ಕರಡಿ ಕತೆ .
We get a lot of submissions from our listeners, each of which is special because they took the time to share their special talent. Once in a while, we get something so unique, it stays with us a long time. 6-year-old Srishti and her mother have collaborated to make this story. While the story narration is very rhythmic and almost feels like song, the background effects with Veena make the effort extra special. Thank you Shruthi avare and also to little Srishti.
3 ವರ್ಷದ ವಿಹಾ ( Viha Nithundila ) ನಿರೂಪಿಸಿರುವ ". Rooster Raga ಅನ್ನುವ ಮುದ್ದಾದ ಕತೆ . ಕತೆಯ ಜತೆ ತಂದೆ ತಾಯಿಗಳು ಕೊಟ್ಟಿರುವ Background ಸಂಗೀತ ಮತ್ತೆ ಮತ್ತೆ ಕೇಳಬೇಕು ಅನ್ನಿಸುತ್ತದೆ .
ಈ ಸಲದ ವಿಶೇಷ ವ್ಯಕ್ತಿ , ಕನ್ನಡತಿ , ಬಾಹ್ಯಾಕಾಶ ವಿಜ್ಞಾನಿ ಶ್ರೀಮತಿ ಬಿ. ಪಿ . ದಾಕ್ಷಾಯಿಣಿ . ಮಂಗಳ ಗ್ರಹದ ಬಗ್ಗೆ ಸಂಶೋಧನೆ ಮಾಡಲು 2014ರಲ್ಲಿ ಭಾರತದ ವಿಜ್ಞಾನಿಗಳು ತಯಾರಿಸಿ, ಹಾರಿಸಿದ ಉಪಗ್ರಹದ ಹೆಸರು "ಮಂಗಳಯಾನ". ಈ ಮಹತ್ಸಾಧನೆಯ ಹಿಂದೆ ಇದ್ದ ಪ್ರಮುಖ ವಿಜ್ಞಾನಿಗಳಲ್ಲಿ ಶ್ರೀಮತಿ . ಬಿ ಪಿ ದಾಕ್ಷಾಯಿಣಿ ಅವರು ಕೂಡ ಒಬ್ಬರು . ಈ ಕಂತಿನ ಇನ್ನೊಂದು ವಿಶೇಷ ಅಂದರೆ , ದಾಕ್ಷಾಯಿಣಿ ಅವರ ಜತೆ ಮಾತನಾಡುವ ಅವಕಾಶ ಸಿಕ್ಕಿದ್ದು . ಅವರ ದನಿಯಲ್ಲಿ , ಅವರ ಬಾಲ್ಯ , ಓದು , ನೌಕರಿ , ಅವರ ಹವ್ಯಾಸಗಳು ಇವೆಲ್ಲದರ ಬಗ್ಗೆ ತಿಳಿಯುವ ಅವಕಾಶ ಸಿಕ್ಕಿದ್ದು ಸಂತಸದ ಸಂಗತಿ . ಅಶ್ವಿನಿ ಅವರ ದನಿಯಲ್ಲಿ ಮೂಡಿರುವ ಈ ಕಂತಿನಲ್ಲಿ , ದಾಕ್ಷಾಯಿಣಿ ಅವರ ಕೆಲವು ಮಾತಿನ ತುಣುಕುಗಳನ್ನೂ ಸೇರಿಸಲಾಗಿದೆ . ಕೇಳಿ .
"ವ್ಯಕ್ತಿ ಪರಿಚಯ " ಸರಣಿಯಲ್ಲಿ ಈ ಸಲದ ಪರಿಚಯ "ಹೆಲೆನ್ ಕೆಲ್ಲೆರ್ ". ಹೆಲೆನ್ ಕೆಲ್ಲೆರ್ , ಅತಿ ವಿಶಿಷ್ಟ ಮಹಿಳೆ . ಕಣ್ಣು , ಕಿವಿ ಕೇಳದೆ ಇದ್ದರೂ ಬಾಯಿ , ಹಾಗೂ ಸ್ಪರ್ಶದ ( Touch ) ಸಹಾಯದಿಂದ ಕಾಲೇಜು ಶಿಕ್ಷಣ ಪಡೆದವರು . ನಂತರ , ಪ್ರಪಂಚದಾದ್ಯಂತ ಲಕ್ಷಾಂತರ ಅಂಗವಿಕಲರಿಗೆ ಸ್ಪೂರ್ತಿಯಾಗಿ ನಿಂತವರು . ಇವರ ಜೀವನದ ರೋಚಕ ಕತೆ , ಈ ಸಲ "ಕೇಳಿರೊಂದು ಕತೆಯಾ " ದಲ್ಲಿ .
" ವ್ಯಕ್ತಿ ಪರಿಚಯ " ಸರಣಿಯಲ್ಲಿ ಮುಂದುವರೆಯುತ್ತಾ ಈ ಸಲ ಕನ್ನಡಿಗ ಅನಂತ್ ಪೈ ಅವರ ಬಗ್ಗೆ ತಿಳಿದುಕೊಳ್ತಿದ್ದೇವೆ . ಭಾರತೀಯ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಸ್ವಲ್ಪ ಕೊರತೆಯೇ . ಅದರಲ್ಲೂ ಪುರಾಣ ಕತೆಗಳನ್ನು ಬಿಟ್ಟರೆ , ಆಧುನಿಕ ಸಾಹಿತ್ಯದಲ್ಲಿ Easy Reading ಆಗಿರುವ ಮಕ್ಕಳ ಸಾಹಿತ್ಯ ಅತಿ ಕಡಿಮೆ ಅಂತಲೇ ಹೇಳಬೇಕು . ಈ ಕೊರತೆ ಮನಗಂಡ ಪೈ ಅವರ ಕೊಡುಗೆ ಭಾರತೀಯ ಮಕ್ಕಳ ಸಾಹಿತ್ಯಕ್ಕೆ ವಿನೂತನ .
ಲುಡ್ವಿಗ್ ವ್ಯಾನ್ ಬೀಥೋವನ್ ( Ludwig Van Beethoven) , Western Classical ಸಂಗೀತದಲ್ಲಿ ಅತಿ ದೊಡ್ಡ ಹೆಸರು . ಕರ್ನಾಟಕ ಸಂಗೀತದಲ್ಲಿ ಪುರಂದರ ದಾಸರು ಹೇಗೋ , ವಿಶ್ವ ಸಂಗೀತ ಕ್ಷೇತ್ರದಲ್ಲಿ ಬಿಥೋವನ್ ಕೂಡ . ಕ್ಲಾಸಿಕಲ್ ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಯ ಮಹದಾಸೆ ಬಿಥೋವನ್ ಅವರ ಸಿಂಫೊನಿ ಗಳಲ್ಲಿ ನುಡಿಸಬೇಕು ಅನ್ನುವುದು . ಅತ್ಯುತ್ತಮ Composer ಆಗಿದ್ದ ಬೀಥೋವನ್ ಕಿವುಡ ಹಾಗೂ ಮೂಕನಾಗಿದ್ದ ಅಂದರೆ ಆಶ್ಚರ್ಯ ಆಗುತ್ತೆ ಅಲ್ವಾ ? ಈ ವಾರದ "ವ್ಯಕ್ತಿ ಪರಿಚಯ " ಸರಣಿಯಲ್ಲಿ ಬೀಥೋವನ್ ಬಗ್ಗೆ ಇನ್ನಷ್ಟು ತಿಳಿಯೋಣ ಬನ್ನಿ . ಬೀಥೋವನ್ ಅವರ ಇನ್ನೂ ಕೆಲವು ಚಿತ್ರಗಳು , ಹಾಗೂ ಅವರ ಸಂಗೀತದ ತುಣುಕುಗಳನ್ನು ನಮ್ಮ ವೆಬ್ಸೈಟ್ https://kelirondukatheya.org/ep113 ರಲ್ಲಿ ನೋಡಬಹುದು .
Jagadeesh Hiremath
please upload another last two avatar stories in Dashavatara series
Manjunath Cd
awesome., great narration, best quality voice and recording